ಅಧಿವೇಶನದಲ್ಲಿ ಭಾಗವಹಿಸದಿರುವುದು ಬಹಿಷ್ಕಾರವಲ್ಲ -ಬೊಮ್ಮಾಯಿ

khushihost
ಅಧಿವೇಶನದಲ್ಲಿ ಭಾಗವಹಿಸದಿರುವುದು ಬಹಿಷ್ಕಾರವಲ್ಲ -ಬೊಮ್ಮಾಯಿ

ಬೆಳಗಾವಿ: ರಮೇಶ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ನಿರಂತರ  ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಸುವರ್ಣ ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ಅವರ ಭಾವನೆಗಳು ನನಗೆ ಅರ್ಥವಾಗುತ್ತವೆ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ ಪ್ರತಿಕ್ರಯಿಸಿದ್ದಾರೆ ಎಂದರು.

ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಯಿಸಿದ ಅವರು, ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆಯ ಬಳಿ ಇರುವ ಪ್ರಕರಣ ಇದೆ, ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ ಅವರಿಗೂ ತಿಳಿದಿರುವ ವಿಚಾರ ಎಂದು ಹೇಳಿದರು.

Share This Article