ಅಭಿಮಾನಿಗಳು ಸಿಡಿಸಿದ ಪಟಾಕಿಯ ಕಿಡಿ ತಗುಲಿ ಸಚಿವರ ಕಣ್ಣಿಗೆ ಗಾಯ

khushihost
ಅಭಿಮಾನಿಗಳು ಸಿಡಿಸಿದ ಪಟಾಕಿಯ ಕಿಡಿ ತಗುಲಿ ಸಚಿವರ ಕಣ್ಣಿಗೆ ಗಾಯ

ತುಮಕೂರು: ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ಸಿಡಿದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಕಣ್ಣಿಗೆ ಗಾಯವಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಈ ಘಟನೆ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜಣ್ಣ ಅವರು ಅಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲು ಹಾಸನಕ್ಕೆ ತೆರಳುತ್ತಿದ್ದರು. ಕುಣಿಗಲ್ ಮಾರ್ಗವಾಗಿ ರಾಜಣ್ಣ ತೆರಳುತ್ತಿರುವ ಈ ಬಗ್ಗೆ ಮಾಹಿತಿ ತಿಳಿದ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಕುಣಿಗಲ್ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಸ್ವಾಗತಿಸಿ ಹಾರ ಹಾಕಿ ಅಭಿನಂದಿಸಿದರು. ಈ ವೇಳೆ ಸಚಿವರ ಸಮೀಪದಲ್ಲಿಯೇ ಹಾರಿಸಿದ ಪಟಾಕಿ ಸಿಡಿದು ಅವರ ಒಂದು ಕಣ್ಣಿಗೆ ಗಾಯವಾಗಿದೆ. ಪಟಾಕಿ ಹಚ್ಚಿದಾಗ ರಾಜಣ್ಣ ತಮ್ಮ ಕನ್ನಡಕ ತೆಗೆಯುತ್ತಿದ್ದರು.

ತಕ್ಷಣವೇ ಅವರು ಖಾಸಗಿ ಆಸ್ಪತ್ರೆಗೆ ತೆರಳಿ ನೇತ್ರ ತಜ್ಞರಿಂದ ಅದಕ್ಕೆ ಚಿಕಿತ್ಸೆ ಪಡೆದು ನಂತರ ಹಾಸನಕ್ಕೆ ಪ್ರಯಾಣ ಬೆಳೆಸಿದರು.

Share This Article