ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯಕ್ಕೆ 1007.26 ಕೋಟಿ ರೂ.

khushihost
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯಕ್ಕೆ 1007.26 ಕೋಟಿ ರೂ.

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂಪಾಯಿಯನ್ನು ಕೇಂದ್ರ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಧಾನಿ ಕಿಸಾನ್ ಸಮ್ಮಾನ್‌ ಸಮ್ಮೇಳನದಲ್ಲಿ 600 ಪಿಎಂ ಕಿಸಾನ್‌ ಸಮೃದ್ಧಿ ಕೇಂದ್ರಗಳನ್ನು ಉದ್ಘಾಟಿಸಿದರು. ಈ ವೇಳೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಮೂಲಕ 16 ಸಾವಿರ ಕೋಟಿ ರೂ.ಗಳ 12 ನೇ ಕಂತಿನ ಆರ್ಥಿಕ ನೆರವನ್ನು ಫಲಾನುಭವಿ ಕೃಷಿಕರಿಗೆ ವರ್ಗಾಯಿಸಿದರು.

ಈ ವೇಳೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನಡಿ ಕರ್ನಾಟಕದ 50.36 ಲಕ್ಷ ರೈತರಿಗೆ 1007.26 ಕೋಟಿ ಸಹಾಯ ಧನವನ್ನು ರೈತರ ಖಾತಗೆ ವರ್ಗಾವಣೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Share This Article