ಸುಪ್ರೀಮ ಕೋರ್ಟ ಮುಖ್ಯ ನ್ಯಾಯಮೂರ್ತಿ ನೇಮಕ ಪ್ರಶ್ನಿಸಿದ ವ್ಯಕ್ತಿಗೆ 1 ಲಕ್ಷ ರೂ. ದಂಡ

khushihost
ಸುಪ್ರೀಮ ಕೋರ್ಟ ಮುಖ್ಯ ನ್ಯಾಯಮೂರ್ತಿ ನೇಮಕ ಪ್ರಶ್ನಿಸಿದ ವ್ಯಕ್ತಿಗೆ 1 ಲಕ್ಷ ರೂ. ದಂಡ

ಹೊಸದಿಲ್ಲಿ: ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ 1 ಲಕ್ಷ ರೂಪಾಯಿ ದಂಡದೊಂದಿಗೆ ವಜಾಗೊಳಿಸಿದೆ.

ಇದೊಂದು ಪ್ರಚಾರ ಹಿತಾಸಕ್ತಿಯ ದಾವೆ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಮ್ ಪ್ರಸಾದ ಅವರ ಪೀಠ ಹೇಳಿದೆ.

ಯಾವುದೇ ವಸ್ತು, ವಿಷಯವಿಲ್ಲದ ಈ ಅರ್ಜಿಯನ್ನು ಕೇವಲ ಪ್ರಚಾರ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿದೆ.

ಅರ್ಜಿದಾರ ಸಂಜೀವ ಕುಮಾರ ತಿವಾರಿ ಎಂಬವರು ನ್ಯಾಯಮೂರ್ತಿ ಚಂದ್ರಚೂಡ ಅವರನ್ನು ಸಿಜೆಐ ಆಗಿ ನೇಮಕ ಮಾಡಿರುವುದನ್ನು ಆಕ್ಷೇಪಿಸಿದ್ದರು. ಈ ನೇಮಕವು ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಅವರು ಆರೋಪಿಸಿದ್ದರು.

ನವೆಂಬರ್ 9 ರಂದು ಭಾರತದ 50ನೇ ಸಿಜೆಐ ಆಗಿ ನ್ಯಾಯಮೂರ್ತಿ ಚಂದ್ರಚೂಡ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Share This Article