ಪ್ರಾರ್ಥನೆ ಮಾಡುವಾಗ 200 ಜನರಿಂದ ಮಸೀದಿ ಮೇಲೆ ದಾಳಿ 

khushihost
ಪ್ರಾರ್ಥನೆ ಮಾಡುವಾಗ 200 ಜನರಿಂದ ಮಸೀದಿ ಮೇಲೆ ದಾಳಿ 

ಗುರುಗ್ರಾಮ: 200 ಕ್ಕೂ ಹೆಚ್ಚು ಜನರ ಗುಂಪು ರಾಜಧಾನಿ ದೆಹಲಿಗೆ ಹತ್ತಿಕೊಂಡಿರುವ ಗುರುಗ್ರಾಮ‌ನ ಭೋರಾ ಕಲನ್ ಗ್ರಾಮದಲ್ಲಿ ಮಸೀದಿಯನ್ನು ಧ್ವಂಸ ಮಾಡಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ ನಡೆದಿದ್ದು, ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆಯನ್ನೂ ಒಡ್ಡಲಾಗಿದೆ.

ಸುಬೇದಾರ್ ನಜರ್ ಮೊಹಮ್ಮದ್ ನೀಡಿದ ದೂರಿನ ಪ್ರಕಾರ, ಭೋರ ಕಾಳನ್ ಗ್ರಾಮದಲ್ಲಿ ಕೇವಲ ನಾಲ್ಕು ಮುಸ್ಲಿಂ ಕುಟುಂಬಗಳಿವೆ. ರಾಜೇಶ ಚೌಹಾಣ ಅಲಿಯಾಸ್ ಬಾಬು, ಅನಿಲ ಭಡೋರಿಯಾ ಮತ್ತು ಸಂಜಯ ವ್ಯಾಸ್ ನೇತೃತ್ವದ ಸುಮಾರು 200 ಜನರನ್ನು ಒಳಗೊಂಡ ಗುಂಪು ಮಸೀದಿಯನ್ನು ಸುತ್ತುವರೆದು ಪ್ರಾರ್ಥನಾ ಮಂದಿರಕ್ಕೆ ಪ್ರವೇಶಿಸಿ ಅಲ್ಲಿ ನಮಾಜ ಮಾಡುತ್ತಿದ್ದವರನ್ನು ಗ್ರಾಮದಿಂದ ಹೊರಹಾಕುವುದಾಗಿ ಆ ಗುಂಪು ಬೆದರಿಕೆ ಹಾಕಿದೆ.

ರಾತ್ರಿ ಮತ್ತೆ ನಾವು ಮಸೀದಿಯ ಪ್ರಾರ್ಥನಾ ಮಂದಿರದ ಒಳಗೆ ಪ್ರಾರ್ಥನೆ ಮಾಡುತ್ತಿದ್ದಾಗ ಗುಂಪು ಬಂದು ಪ್ರಾರ್ಥನೆ ಮಾಡುವವರ ಮೇಲೆ ಹಲ್ಲೆ ನಡೆಸಿ,  ಪ್ರಾರ್ಥನಾ ಮಂದಿರ ಧ್ವಂಸಗೊಳಿಸಿ ಬೀಗ ಜಡಿದಿದೆ. ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸುಬೇದಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸರು ತಲುಪುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಮೊಹಮ್ಮದ್ ಅವರ ದೂರಿನ ನಂತರ, ರಾಜೇಶ ಚೌಹಾಣ, ಅನಿಲ ಭಡೋರಿಯಾ, ಸಂಜಯ ವ್ಯಾಸ್ ಮತ್ತು ಇತರ ಹಲವರ ವಿರುದ್ಧ ಗಲಭೆ, ಧಾರ್ಮಿಕ ಕಲಹವನ್ನು ಉಂಟುಮಾಡಲು ಪ್ರಯತ್ನಿಸುವುದು ಮತ್ತು ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಸಭೆಯ ಆರೋಪದಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ದೂರಿನನ್ವಯ ಎಫ್‌ಐಆರ್ ದಾಖಲಾಗಿದ್ದು, ಸತ್ಯಾಸತ್ಯತೆ ಪರಿಶೀಲಿಸುತ್ತಿದ್ದೇವೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತನಿಖಾಧಿಕಾರಿ ಹಿರಿಯ ಪೊಲೀಸ್ ಅಧಿಕಾರಿ ಗಜೇಂದರ ಸಿಂಗ್ ಹೇಳಿದ್ದಾರೆ

Share This Article