ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

khushihost
ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಇದೇ ಅಕ್ಟೋಬರ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದ್ದು ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅ. 16 ರ ಸಂಜೆಯೊಳಗೆ ಕಾಂಗ್ರೆಸ್ ಎಲ್ಲಾ ಶಾಸಕರು ಬೆಂಗಳೂರಿಗೆ ಬರಬೇಕು ಎಂದು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು, ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಮತದಾನ ಮಾಡಲು ಅ. 16 ರ ಸಂಜೆಯೊಳಗೆ ಎಲ್ಲಾ ಶಾಸಕರು ಬೆಂಗಳೂರಿಗೆ ಬರುವಂತೆ ತಿಳಿಸಿದ್ದಾರೆ.

Share This Article