ಬಿಸಿ ಊಟ ನೌಕರರಿಗೆ ಜಾಬ್ ಕಾರ್ಡ : ರಾಜ್ಯ ಸರ್ಕಾರ ಆದೇಶ

khushihost
ಬಿಸಿ ಊಟ ನೌಕರರಿಗೆ ಜಾಬ್ ಕಾರ್ಡ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆದೇಶದಲ್ಲಿ ತಿಳಿಸಿರುವಂತೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯು ಸರ್ಕಾರದ ಪೂರ್ಣಕಾಲಿಕ ನೌಕರರಾಗುವುದಿಲ್ಲ. ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಾರೆ.

ಆದ್ದರಿಂದ ಈ ಅಡುಗೆ ಸಿಬ್ಬಂದಿಯ ವಾಸಸ್ಥಳವನ್ನು ಪರಿಶೀಲಿಸಿ ಮಹಾತ್ಮ ಗಾಂಧಿ ನರೇಗಾ ಅಧಿನಿಯಮದನ್ವಯ ಜಾಬ್ ಕಾರ್ಡ ನೀಡಲು ಮತ್ತು ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಒದಗಿಸಲು ಅಗತ್ಯ ಕ್ರಮ ವಹಿಸುವಂತೆ ಆದೇಶಿಸಲಾಗಿದೆ.

Share This Article